Mysore
36
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಉಳ್ಳಾಲ ಖಾಝೀ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್‌ ಫಝಲ್‌ ಕೋಯಮ್ಮ ತಂಙಳ್‌ ಅಲ್‌ ಬುಖಾರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ.

ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ವಿಧಾನಸಭಾ ಸ್ವೀಕರ್‌ ಯು.ಟಿ ಖಾದರ್‌ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಸಂತಾಪ ಸೂಚಿಸಿದ್ದಾರೆ.

Tags:
error: Content is protected !!