ಬೆಂಗಳೂರು: ಕಳೆದ ವರ್ಷ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರದ ಜಾಹೀರಾತು ನೀಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ನೀಡಲಾಗಿತ್ತು.
ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿತ್ತು. ಮತ್ತು ಪೇ ಸಿಎಂ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿತ್ತು. ಇದರಿಂದ ಬಿಜೆಪಿಗೆ ಧಕ್ಕೆ ತಂದ ಆರೋಪದಡಿ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ(ಜೂನ್.೧) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.
42ನೇ ಎಸಿಎಂಎಂ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರು ವಿಚಾರಣೆ ನಡೆಸಿದ್ದು, ಸಿಎಂ ಮತ್ತು ಡಿಸಿಎಂಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಇಬ್ಬರು ನಾಯಕರು ನಾಯಕರು ಬಾಂಡ್ಗೆ ಸಹಿ ಹಾಕಿ ಬಳಿಕ ನ್ಯಾಯಾಲಯದಿಂದ ವಾಪಸಾಗಿದ್ದಾರೆ.
ಬಿಜೆಪಿ ಪರ ವಿನೋದ್ ಕುಮಾರ್ ವಾದ ಮಂಡಿಸಿದರೇ, ಆಡಳಿತ ಪಕ್ಷದ ಪರವಾಗಿ ಎಜಿ ಎಸ್.ಎ ಅಹಮದ್ ವಾದ ಮಂಡಿಸಿದರು.
ಇನ್ನು ಮೂರನೇ ಬಾರಿಗೂ ಕೋರ್ಟ್ ಸಮನ್ಸ್ ನೀಡಿಯೂ ವಿಚಾರಣೆಗೆ ಹಾಜರಾಗದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದ್ದು, ರಾಗಾ ಗೆ ವಿನಾಯಿತಿ ನೀಡಬೇಕೋ ಅಥವಾ ವಾರೆಂಟ್ ನೀಡಬೇಕೋ ಎಂಬ ಬಗ್ಗೆ ಇಂದು ಮದ್ಯಾಹ್ನ 3 ಗಂಟೆಗೆ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಕೋರ್ಟ್ನಿಂದ ವಾಪಸಾಗುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಮ್ಮ ವಿರುದ್ಧ ಸಿವಿಲ್ ರೂಪದ ಖಾಸಗಿ ಕೇಸ್ ದಾಖಲಿಸಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಹಾಗಾಗಿ ಕೋರ್ಟ್ ಮುಂದೆ ಹಾಜರಾಗಿದ್ದೇವೆ. ನನ್ನ ಹಾಗೂ ರಾಹುಲ್ ವಿರುದ್ಧ ದೂರು ದಾಖಲಾಗಿತ್ತು. ಇಂದು ನನಗೆ ಜಾಮೀನು ಸಿಕ್ಕಿದ್ದು, ರಾಹುಲ್ ಗಾಂಧಿ ಕೋರ್ಟ್ ಮುಂದೆ ಹಾಜರಾಗುತ್ತಾರೆ ಎಂದು ಸಿಎಂ ಸ್ಪಷ್ಟನೆ ನೀಡಿದರು.
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…