ಬೆಂಗಳೂರು: ಕಳೆದ ವರ್ಷ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರದ ಜಾಹೀರಾತು ನೀಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ನೀಡಲಾಗಿತ್ತು.
ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿತ್ತು. ಮತ್ತು ಪೇ ಸಿಎಂ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿತ್ತು. ಇದರಿಂದ ಬಿಜೆಪಿಗೆ ಧಕ್ಕೆ ತಂದ ಆರೋಪದಡಿ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ(ಜೂನ್.೧) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು.
42ನೇ ಎಸಿಎಂಎಂ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರು ವಿಚಾರಣೆ ನಡೆಸಿದ್ದು, ಸಿಎಂ ಮತ್ತು ಡಿಸಿಎಂಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಇಬ್ಬರು ನಾಯಕರು ನಾಯಕರು ಬಾಂಡ್ಗೆ ಸಹಿ ಹಾಕಿ ಬಳಿಕ ನ್ಯಾಯಾಲಯದಿಂದ ವಾಪಸಾಗಿದ್ದಾರೆ.
ಬಿಜೆಪಿ ಪರ ವಿನೋದ್ ಕುಮಾರ್ ವಾದ ಮಂಡಿಸಿದರೇ, ಆಡಳಿತ ಪಕ್ಷದ ಪರವಾಗಿ ಎಜಿ ಎಸ್.ಎ ಅಹಮದ್ ವಾದ ಮಂಡಿಸಿದರು.
ಇನ್ನು ಮೂರನೇ ಬಾರಿಗೂ ಕೋರ್ಟ್ ಸಮನ್ಸ್ ನೀಡಿಯೂ ವಿಚಾರಣೆಗೆ ಹಾಜರಾಗದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದ್ದು, ರಾಗಾ ಗೆ ವಿನಾಯಿತಿ ನೀಡಬೇಕೋ ಅಥವಾ ವಾರೆಂಟ್ ನೀಡಬೇಕೋ ಎಂಬ ಬಗ್ಗೆ ಇಂದು ಮದ್ಯಾಹ್ನ 3 ಗಂಟೆಗೆ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಕೋರ್ಟ್ನಿಂದ ವಾಪಸಾಗುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಮ್ಮ ವಿರುದ್ಧ ಸಿವಿಲ್ ರೂಪದ ಖಾಸಗಿ ಕೇಸ್ ದಾಖಲಿಸಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಹಾಗಾಗಿ ಕೋರ್ಟ್ ಮುಂದೆ ಹಾಜರಾಗಿದ್ದೇವೆ. ನನ್ನ ಹಾಗೂ ರಾಹುಲ್ ವಿರುದ್ಧ ದೂರು ದಾಖಲಾಗಿತ್ತು. ಇಂದು ನನಗೆ ಜಾಮೀನು ಸಿಕ್ಕಿದ್ದು, ರಾಹುಲ್ ಗಾಂಧಿ ಕೋರ್ಟ್ ಮುಂದೆ ಹಾಜರಾಗುತ್ತಾರೆ ಎಂದು ಸಿಎಂ ಸ್ಪಷ್ಟನೆ ನೀಡಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…