ರಾಜ್ಯ

ನೂತನ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ ಎಂದು ಶುಭಾಶಯ ಹಾರೈಸಿದ್ದಾರೆ.

ಜಾತಿ, ಧರ್ಮಗಳ‌ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.
2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ 2025 – ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಹೊಸ ವರ್ಷ ಎಲ್ಲ ಸಂಕಷ್ಟಗಳನ್ನು ದೂರಗೊಳಿಸಿ, ಎಲ್ಲರ ಆಸೆ, ಆಕಾಂಕ್ಷೆ, ಕನಸುಗಳು ಈಡೇರಲಿ. ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ನೆಲೆಸುವ ನವ ವರ್ಷವಾಗಲಿ, ನಾಡು ಸಮೃದ್ಧಿಯ ನೆಲೆಬೀಡಾಗಲೆಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಶಿಕ್ಷಕರೇ ಇಲ್ಲ, ಎಸ್‌ಎಸ್‌ಎಲ್‌ಸಿಯಲ್ಲಿ 94% ಬಂದಿದ್ದು ಹೇಗೆ? ಪರೀಕ್ಷೆಯಲ್ಲಿ ನಕಲು ನಡೆದಿದೆ ; ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…

8 mins ago

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

50 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

1 hour ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

3 hours ago