ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ ಎಂದು ಶುಭಾಶಯ ಹಾರೈಸಿದ್ದಾರೆ.
ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.
2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ 2025 – ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಹೊಸ ವರ್ಷ ಎಲ್ಲ ಸಂಕಷ್ಟಗಳನ್ನು ದೂರಗೊಳಿಸಿ, ಎಲ್ಲರ ಆಸೆ, ಆಕಾಂಕ್ಷೆ, ಕನಸುಗಳು ಈಡೇರಲಿ. ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ನೆಲೆಸುವ ನವ ವರ್ಷವಾಗಲಿ, ನಾಡು ಸಮೃದ್ಧಿಯ ನೆಲೆಬೀಡಾಗಲೆಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…