ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು ಹೆಚ್ಚಿಸಿಲ್ಲ, ಹಾಲಿನ ಪ್ಯಾಕೆಟ್ ಗಳಲ್ಲಿ ಹೆಚ್ಚುವರಿ ಹಾಲನ್ನು ನೀಡಲಾಗುತ್ತಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಎಂಎಲ್ ಮತ್ತು ಒಂದು ಲೀಟರ್ ಪ್ಯಾಕೆಟ್ ನಲ್ಲಿ 100 ಮಿ ಲೀ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಈ ಹೆಚ್ಚುವರಿ ಹಾಲಿಗೆ ರೂ. 1 ಮತ್ತು ರೂ 2 ಹೆಚ್ಚು ನೀಡುವಂತೆ ಬಳಕೆದಾರರನ್ನು ಕೇಳಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಜನ ನಮಗೆ ಹೆಚ್ಚುವರಿ ಹಾಲು ಬೇಕಿಲ್ಲ ಎನ್ನುತ್ತಿದ್ದಾರೆ ಇದಕ್ಕೆ ಏನು ಹೇಳ್ತಿರಾ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ ಆದರು. ಹೆಚ್ಚು ಉತ್ಪಾದನೆ ಆಗಿರುವ ಹಾಲನ್ನು ಚೆಲ್ಲಬೇಕಾ? ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪತ್ತಿಯಾಗುತಿತ್ತು, ಈಗ 99 ಲಕ್ಷ ಹಾಲು ಮಾರಾಟಕ್ಕೆ ಲಭ್ಯವಾಗುತ್ತಿದೆ, ಬಿಜೆಪಿಯವರು ಏನೋ ಹೇಳ್ತಾರೆ ಅಂದಾಕ್ಷಣ ಅದನ್ನೇ ನಂಬಿ ಬರೆದುಬಿಡಬೇಡಿ, ಕೊಂಚ ವಿವೇಚನೆ ಬಳಸಿ ಎಂದು ಸಿಎಂ ಹೇಳಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…