ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು ಹೆಚ್ಚಿಸಿಲ್ಲ, ಹಾಲಿನ ಪ್ಯಾಕೆಟ್ ಗಳಲ್ಲಿ ಹೆಚ್ಚುವರಿ ಹಾಲನ್ನು ನೀಡಲಾಗುತ್ತಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಎಂಎಲ್ ಮತ್ತು ಒಂದು ಲೀಟರ್ ಪ್ಯಾಕೆಟ್ ನಲ್ಲಿ 100 ಮಿ ಲೀ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಈ ಹೆಚ್ಚುವರಿ ಹಾಲಿಗೆ ರೂ. 1 ಮತ್ತು ರೂ 2 ಹೆಚ್ಚು ನೀಡುವಂತೆ ಬಳಕೆದಾರರನ್ನು ಕೇಳಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಜನ ನಮಗೆ ಹೆಚ್ಚುವರಿ ಹಾಲು ಬೇಕಿಲ್ಲ ಎನ್ನುತ್ತಿದ್ದಾರೆ ಇದಕ್ಕೆ ಏನು ಹೇಳ್ತಿರಾ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ ಆದರು. ಹೆಚ್ಚು ಉತ್ಪಾದನೆ ಆಗಿರುವ ಹಾಲನ್ನು ಚೆಲ್ಲಬೇಕಾ? ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪತ್ತಿಯಾಗುತಿತ್ತು, ಈಗ 99 ಲಕ್ಷ ಹಾಲು ಮಾರಾಟಕ್ಕೆ ಲಭ್ಯವಾಗುತ್ತಿದೆ, ಬಿಜೆಪಿಯವರು ಏನೋ ಹೇಳ್ತಾರೆ ಅಂದಾಕ್ಷಣ ಅದನ್ನೇ ನಂಬಿ ಬರೆದುಬಿಡಬೇಡಿ, ಕೊಂಚ ವಿವೇಚನೆ ಬಳಸಿ ಎಂದು ಸಿಎಂ ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…