ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು ಹೆಚ್ಚಿಸಿಲ್ಲ, ಹಾಲಿನ ಪ್ಯಾಕೆಟ್ ಗಳಲ್ಲಿ ಹೆಚ್ಚುವರಿ ಹಾಲನ್ನು ನೀಡಲಾಗುತ್ತಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಎಂಎಲ್ ಮತ್ತು ಒಂದು ಲೀಟರ್ ಪ್ಯಾಕೆಟ್ ನಲ್ಲಿ 100 ಮಿ ಲೀ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಈ ಹೆಚ್ಚುವರಿ ಹಾಲಿಗೆ ರೂ. 1 ಮತ್ತು ರೂ 2 ಹೆಚ್ಚು ನೀಡುವಂತೆ ಬಳಕೆದಾರರನ್ನು ಕೇಳಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಜನ ನಮಗೆ ಹೆಚ್ಚುವರಿ ಹಾಲು ಬೇಕಿಲ್ಲ ಎನ್ನುತ್ತಿದ್ದಾರೆ ಇದಕ್ಕೆ ಏನು ಹೇಳ್ತಿರಾ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ ಆದರು. ಹೆಚ್ಚು ಉತ್ಪಾದನೆ ಆಗಿರುವ ಹಾಲನ್ನು ಚೆಲ್ಲಬೇಕಾ? ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪತ್ತಿಯಾಗುತಿತ್ತು, ಈಗ 99 ಲಕ್ಷ ಹಾಲು ಮಾರಾಟಕ್ಕೆ ಲಭ್ಯವಾಗುತ್ತಿದೆ, ಬಿಜೆಪಿಯವರು ಏನೋ ಹೇಳ್ತಾರೆ ಅಂದಾಕ್ಷಣ ಅದನ್ನೇ ನಂಬಿ ಬರೆದುಬಿಡಬೇಡಿ, ಕೊಂಚ ವಿವೇಚನೆ ಬಳಸಿ ಎಂದು ಸಿಎಂ ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…