ರಾಮನಗರ: ಮೈಸೂರು ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಕೇಂದ್ರ ಬಿಜೆಪಿ ಷಡ್ಯಂತ್ರ ಮಾಡುತ್ತಿದ್ದು, ತನಿಖಾಧಿಕಾರಿಗಳಿಗೆ ಒತ್ತಡ ಹಾಕುತ್ತಿದೆ. ಇದರಲ್ಲಿ ಸಿಎಂ ಹೆಸರು ಹೇಳಿ ಎಂದು ಮುಡಾ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು ಮುಡಾ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಈಗಾಗಲೇ ಇ.ಡಿ ತನಿಖೆ ಮಾಡುತ್ತಿದೆ. ಮೊನ್ನೆ 300 ಕೋಟಿ ಎಂದು ಹೇಳಿದ್ದರು. ಸಿಎಂಗೂ ಅದಕ್ಕೂ ಸಂಬಂಧ ಇದ್ಯಾ ಎಂದು ಪ್ರಶ್ನೆ ಮಾಡಿದರು.
ಐಟಿ, ಇಡಿ ಬಿಜೆಪಿ ಪಕ್ಷದ ಕೈಗೊಂಬೆಗಳಾಗಿವೆ. ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು. ವಿರೋಧಿಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಕ್ಕ ಉತ್ತರ ಕೊಟ್ಟು ಗಟ್ಟಿಯಾಗಿ ನಿಲ್ಲುತ್ತೇವೆ ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…