ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಡಿನ್ನರ್ ಮೀಟಿಂಗಡ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂರು ಅಜೆಂಡಾಗಳನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರ ಜೊತೆ ವಿದೇಶ ಪ್ರವಾಸದಲ್ಲಿದ್ದು, ಎಂಜಾಯ್ ಮೂಡ್ನಲ್ಲಿದ್ದಾರೆ. ಈ ಬೆನ್ನಲ್ಲೇ ಇತ್ತ ಸಿಎಂ ಸಿದ್ದು ಬಣದಿಂದ ಡಿನ್ನರ್ ಪಾರ್ಟಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಯಾಕೆ ಈ ಸಭೆ ನಡೆಸಬೇಕಿತ್ತು ಎಂದು ಕೆಲ ಸಚಿವರು ಪ್ರಶ್ನೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಕೆಪಿಸಿಸಿ ಪಟ್ಟ ಸಿಗಲಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದು, ಇದರಲ್ಲಿ ಗೃಹ ಸಚಿವ ಪರಮೇಶ್ವರ್, ಸಚಿವ ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು.
ಇನ್ನು ರಾಜ್ಯ ಬಜೆಟ್ಗೂ ಮುನ್ನವೇ ಸಂಪುಟ ಪುನಾರಚನೆ ಗುಸು ಗುಸು ಕೇಳಿಬಂದಿದ್ದು, ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್ ಪಾರ್ಟಿಯಲ್ಲೇ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…