ರಾಜ್ಯ

ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ವಿಚಾರ: ಎಂಎಲ್‌ಸಿ ಎಚ್.ವಿಶ್ವನಾಥ್‌ ಪ್ರತಿಕ್ರಿಯೆ

ಬೆಂಗಳೂರು: ಡಿನ್ನರ್‌ ಮೀಟಿಂಗ್‌ ರುವಾರಿಯೇ ಸಿಎಂ ಸಿದ್ದರಾಮಯ್ಯ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಹೊಸ ಬಾಂಬ್ ಸಿಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಡಿನ್ನರ್‌ ಮೀಟಿಂಗ್ ರುವಾರಿ ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ. ಔತಣಕೂಟ ಏರ್ಪಾಡು ಮಾಡುತ್ತಿರುವುದೇ ಸಿಎಂ ಸಿದ್ದರಾಮಯ್ಯ. 30 ತಿಂಗಳಿ ಆದ ಮೇಲೆ ಅಧಿಕಾರದಿಂದ ಕೆಳಗೆ ಇಳಿಯಬೇಕಲ್ಲಾ, ಅದಕ್ಕೆ ಏನೇನೋ ಆಟ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ. ಡಿಕೆಶಿ ಕಾಂಗ್ರೆಸ್‌ನಲ್ಲಿ 40 ವರ್ಷದಿಂದ ಇದ್ದಾಋೆ. ಅವರು ಯಾವುದೇ ಊರಿಗೆ ಹೋದರೂ ಕಾರ್ಯಕರ್ತರನ್ನು ಗುರುತಿಸುತ್ತಾರೆ. ಆ ಕಾರ್ಯಕರ್ತರು ಈ ಸಿದ್ದರಾಮಯ್ಯಗೆ ಗೊತ್ತೇ ಇಲ್ಲ. ಸಿದ್ದರಾಮಯ್ಯ ಚಮಚ, ಚೇಲಾಗಳನ್ನು ಜೊತೆಯಲ್ಲಿ ಇಟ್ಟುಕೊಂಡು ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಮೂಲಕ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಪರ ಬ್ಯಾಟ್‌ ಬೀಸಿದ್ದು, ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂಬ ಸುಳಿವು ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

42 mins ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

1 hour ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

2 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

3 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

3 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

3 hours ago