ಬೆಂಗಳೂರು: ಡಿನ್ನರ್ ಮೀಟಿಂಗ್ ರುವಾರಿಯೇ ಸಿಎಂ ಸಿದ್ದರಾಮಯ್ಯ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದರು.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಡಿನ್ನರ್ ಮೀಟಿಂಗ್ ರುವಾರಿ ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ. ಔತಣಕೂಟ ಏರ್ಪಾಡು ಮಾಡುತ್ತಿರುವುದೇ ಸಿಎಂ ಸಿದ್ದರಾಮಯ್ಯ. 30 ತಿಂಗಳಿ ಆದ ಮೇಲೆ ಅಧಿಕಾರದಿಂದ ಕೆಳಗೆ ಇಳಿಯಬೇಕಲ್ಲಾ, ಅದಕ್ಕೆ ಏನೇನೋ ಆಟ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ. ಡಿಕೆಶಿ ಕಾಂಗ್ರೆಸ್ನಲ್ಲಿ 40 ವರ್ಷದಿಂದ ಇದ್ದಾಋೆ. ಅವರು ಯಾವುದೇ ಊರಿಗೆ ಹೋದರೂ ಕಾರ್ಯಕರ್ತರನ್ನು ಗುರುತಿಸುತ್ತಾರೆ. ಆ ಕಾರ್ಯಕರ್ತರು ಈ ಸಿದ್ದರಾಮಯ್ಯಗೆ ಗೊತ್ತೇ ಇಲ್ಲ. ಸಿದ್ದರಾಮಯ್ಯ ಚಮಚ, ಚೇಲಾಗಳನ್ನು ಜೊತೆಯಲ್ಲಿ ಇಟ್ಟುಕೊಂಡು ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ಮೂಲಕ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದ್ದು, ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂಬ ಸುಳಿವು ನೀಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…