ರಾಜ್ಯ

ಡಿಕೆಶಿ ವಿದೇಶದಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್: ವಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಪಾರ್ಟಿ ಮೀಟಿಂಗ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗಡ ಮಾಡಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಲೇವಡಿ ಮಾಡಿದರು.

ಇನ್ನು ಸ್ವಾಮಿ ಡಿ.ಕೆ.ಶಿವಕುಮಾರ್‌ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದೇಬಿಟ್ಟಿದೆ. ನಿಮ್ಮ ಮುಂದಿನ ನಿರ್ಧಾರ ಏನೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್‌ ಟಿಕೆಟ್‌ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗಿದೆ.

ಒಬ್ಬ ಡಿಸಿಎಂ ಹಾಗೂ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತದೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು.

ಇದೆಲ್ಲಾ ಬೆಳವಣಿಗೆಗಳು ಆದ ಬಳಿಕ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರಿದರೆ ತಮ್ಮ ಕನಸು ನನಸಾಗಿಯೇ ಉಳಿಯುವುದು ಮಾತ್ರ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago