ರಾಜ್ಯ

ಡಿಕೆಶಿ ವಿದೇಶದಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್: ವಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಪಾರ್ಟಿ ಮೀಟಿಂಗ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗಡ ಮಾಡಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಲೇವಡಿ ಮಾಡಿದರು.

ಇನ್ನು ಸ್ವಾಮಿ ಡಿ.ಕೆ.ಶಿವಕುಮಾರ್‌ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದೇಬಿಟ್ಟಿದೆ. ನಿಮ್ಮ ಮುಂದಿನ ನಿರ್ಧಾರ ಏನೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್‌ ಟಿಕೆಟ್‌ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗಿದೆ.

ಒಬ್ಬ ಡಿಸಿಎಂ ಹಾಗೂ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತದೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು.

ಇದೆಲ್ಲಾ ಬೆಳವಣಿಗೆಗಳು ಆದ ಬಳಿಕ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರಿದರೆ ತಮ್ಮ ಕನಸು ನನಸಾಗಿಯೇ ಉಳಿಯುವುದು ಮಾತ್ರ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

1 hour ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

3 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

14 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago