ರಾಜ್ಯ

ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಬೆಂಗಳೂರು ನಗರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಹಾಗೂ ಇತರ ಜನಪ್ರತಿನಿಧಿಗಳೊಂದಿಗೆ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.

ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು, ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಸಾಯಿ ಲೇಔಟ್‌ಗೆ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3 ಕೋಟಿ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲು ಸ್ಪಷ್ಟ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago