ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಭಾರೀ ದಂಗಲ್ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು. ಸಿಎಂ ಸ್ಥಾನದ ಕುರಿತು ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತನಾಡಿದ್ದಾರೆ. ಸಿಎಂ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂದು ಕಿಡಿಕಾರಿದರು.
ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರಕ್ಕೆ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಗ್ಯೂ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸರ್ಕಾರ ಸೂಕ್ತ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತನಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್ ಕಚ್ಚಾಟ ಹುಟ್ಟುಹಾಕುತ್ತಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕಾಂಗ್ರೆಸ್ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಿಎಂ ಸಿದ್ದು ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…