ರಾಜ್ಯ

ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕೆಲಸಕ್ಕೆ ಮುಂದಾಗುತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್‌

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಭಾರೀ ದಂಗಲ್‌ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು. ಸಿಎಂ ಸ್ಥಾನದ ಕುರಿತು ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತನಾಡಿದ್ದಾರೆ. ಸಿಎಂ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರಕ್ಕೆ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಗ್ಯೂ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸರ್ಕಾರ ಸೂಕ್ತ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತನಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕುತ್ತಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕಾಂಗ್ರೆಸ್‌ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಿಎಂ ಸಿದ್ದು ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago