ರಾಜ್ಯ

ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕೆಲಸಕ್ಕೆ ಮುಂದಾಗುತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್‌

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಭಾರೀ ದಂಗಲ್‌ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು. ಸಿಎಂ ಸ್ಥಾನದ ಕುರಿತು ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತನಾಡಿದ್ದಾರೆ. ಸಿಎಂ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರಕ್ಕೆ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಗ್ಯೂ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸರ್ಕಾರ ಸೂಕ್ತ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತನಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕುತ್ತಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕಾಂಗ್ರೆಸ್‌ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಿಎಂ ಸಿದ್ದು ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

2 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

19 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

22 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

23 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

24 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

24 hours ago