Siddaramaiah. Photo: PTI
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ.
ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಶಾಲೆಗಳ ಅಭಿವೃದ್ದಿಗಾಗಿಯೇ ʼನನ್ನ ಶಾಲೆ ನನ್ನ ಅಭಿವೃದ್ದಿʼ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸದೆ. ಈ ಮೂಲಕ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳೆ ಶಾಲೆಯ ಅಭಿವೃದ್ದಿಗೆ ನೆರವಾಗುವ ಜವಬ್ದಾರಿ ನೀಡಲಾಗುತ್ತಿದೆ.
ಈ ಒಂದು ಯೋಜನೆಗೆ ಮಾ.೭ರಂದು ಚಾಲನೆ ದೊರಕಲಿದ್ದು, ತಾವು ಓದಿದ ಶಾಲೆಗೆ ಧೇಣಿಗೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಓದಿದ ಶಾಲೆಯ ಅಭಿವೃದ್ದಿಗೆ ನೆರವಾಗಿರುವುದು ಇದೇ ಮೊದಲಲ್ಲ.
ಈ ಹಿಂದೆ ೨೦೧೫ರಲ್ಲಿ ತಾವು ವಿದ್ಯಾಭ್ಯಾಸ ಮಾಡಿದ್ದ ಶಾಲೆಗೆ ೧ ಎಕ್ಕರೆ ಜಾಗ ನೀಡಿ, ೮ ಕೊಠಡಿ, ೨ ಶೌಚಾಲಯ ಇರುವ ಹೊಸ ಕಟ್ಟಡ ಕಟ್ಟಿಸುವ ಮೂಲಕ ಶಾಲೆಯನ್ನು ಉನ್ನತೀಕರಿಸಿದ್ದರು ಎಂದರು.
ಈಗ ಮುಖ್ಯಮಂತ್ರಿಗಳು ನೀಡುವ ದೇಣಿಗೆಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ಗಳನ್ನು ನಡೆಸಲು ಸ್ಮಾರ್ಟ್ ಟಿವಿ, ಪ್ರೊಜೆಕ್ಟರ್, ಕುರ್ಚಿ, ಮೇಜು ಸೇರಿದಂತೆ ಅಗತ್ಯ ಪರಿಕರಗಳನ್ನು ತರಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…