ರಾಜ್ಯ

ಕರ್ನಾಟಕ ಬಜೆಟ್‌| ಬೆಂಗಳೂರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಪ್ರಾರಂಭಿಸುವ ಮುನ್ನ ಗೋಪಾಲಕಷ್ಣ ಅಡಿಗ ಹಾಗೂ ಕುವೆಂಪು ಅವರ ನುಡಿಗಳನ್ನು ಹೇಳಿದ್ದರು. ಬಳಿಕ ಮಂಡಿನ ನೋವಿನ ಕಾರಣ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಕುಳಿತುಕೊಂಡು ಬಜೆಟ್‌ ಮಂಡಿಸಲು ಅನುಮತಿ ಕೇಳಿದ್ದು, ಹಲವಾರು ಇಲಾಖೆಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆ.

ಈ ಬಾರಿಯ ಬಜೆಟ್ 4,09,549 ರೂ.ಗಳ ಗಾತ್ರವಾಗಿದ್ದು, ಸುಮಾರು 4 ಲಕ್ಷ ಕೋಟಿ ರೂ.ದಾಟಿದೆ. ಅದರಲ್ಲಿ ಬೆಂಗಳೂರಿನಲ್ಲಿ ಟನಲ್‌ ಯೋಜನೆಗೆ 40ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ ಸೇವೆಯನ್ನು ದೇವನಹಳ್ಳಿಯವರೆಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ಮೀಸಲಿರಿಸಲಾಗಿದೆ. ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದಿದ್ದಾರೆ.

ಇನ್ನು ಅತಿಥಿ ಉಪನ್ಯಾಸಕರಿಗೆ 2,000 ಸಾವಿರ ರೂ. ಗೌರವಧನವನ್ನು ನೀಡಲಾಗುವುದು. ಅಲ್ಲದೇ ಸರ್ಕಾರದ ವಿವಿಧ ಫಲಾನುಭವಿಗಳಿಗೆ ಮಧ್ಯವರ್ತಿಗಳಿಲ್ಲದೆ 1 ಲಕ್ಷ ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಕಲ್ಯಾಣ ಇಲಾಖೆಗಳ ಮೂಲಕ ಅಸಹಾಯಕರನ್ನು ಬಲಗೊಳಿಸಲು ಆಯವ್ಯಯ ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago