ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬೆಂಗಳೂರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಪ್ರಾರಂಭಿಸುವ ಮುನ್ನ ಗೋಪಾಲಕಷ್ಣ ಅಡಿಗ ಹಾಗೂ ಕುವೆಂಪು ಅವರ ನುಡಿಗಳನ್ನು ಹೇಳಿದ್ದರು. ಬಳಿಕ ಮಂಡಿನ ನೋವಿನ ಕಾರಣ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಕುಳಿತುಕೊಂಡು ಬಜೆಟ್ ಮಂಡಿಸಲು ಅನುಮತಿ ಕೇಳಿದ್ದು, ಹಲವಾರು ಇಲಾಖೆಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆ.
ಈ ಬಾರಿಯ ಬಜೆಟ್ 4,09,549 ರೂ.ಗಳ ಗಾತ್ರವಾಗಿದ್ದು, ಸುಮಾರು 4 ಲಕ್ಷ ಕೋಟಿ ರೂ.ದಾಟಿದೆ. ಅದರಲ್ಲಿ ಬೆಂಗಳೂರಿನಲ್ಲಿ ಟನಲ್ ಯೋಜನೆಗೆ 40ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಅಲ್ಲದೇ ಮೆಟ್ರೋ ಸೇವೆಯನ್ನು ದೇವನಹಳ್ಳಿಯವರೆಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ಮೀಸಲಿರಿಸಲಾಗಿದೆ. ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದಿದ್ದಾರೆ.
ಇನ್ನು ಅತಿಥಿ ಉಪನ್ಯಾಸಕರಿಗೆ 2,000 ಸಾವಿರ ರೂ. ಗೌರವಧನವನ್ನು ನೀಡಲಾಗುವುದು. ಅಲ್ಲದೇ ಸರ್ಕಾರದ ವಿವಿಧ ಫಲಾನುಭವಿಗಳಿಗೆ ಮಧ್ಯವರ್ತಿಗಳಿಲ್ಲದೆ 1 ಲಕ್ಷ ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಕಲ್ಯಾಣ ಇಲಾಖೆಗಳ ಮೂಲಕ ಅಸಹಾಯಕರನ್ನು ಬಲಗೊಳಿಸಲು ಆಯವ್ಯಯ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…