eshwar khandre
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 ಚಾರಣಿಗರೊಂದಿಗೆ ಕಳೆದ ಗುರುವಾರ (ಏ.2) ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡಮೋಳ್ ಬೆಟ್ಟಕ್ಕೆ ತೆರಳಿದ್ದರು. ಅಂದು ಮಧ್ಯಾಹ್ನ ಆಕೆ ಕಾಣೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹದಳ, ಶ್ವಾನದಳ ಮತ್ತು ಅರಣ್ಯ ಸಿಬ್ಬಂದಿ ಸೇರಿ 50 ಜನರ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂಸ್ಟೇ ಸಂಪರ್ಕಿಸಿರುವ ಯುವತಿ, ತಾವು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ. ಅವರ ಫೊನ್ ಲೊಕೇಷನ್ ಆಧರಿಸಿ ಶೋಧ ನಡೆಸಲಾಗುತ್ತಿದೆ. ಸ್ಥಳೀಯ ಬುಡಕಟ್ಟು ಜನರೂ ನೆರವಿಗೆ ಧಾವಿಸಿದ್ದು, ಅತ್ಯಾಧುನಿಕ ಥರ್ಮಲ್ ಡ್ರೋನ್ ಕ್ಯಾಮರಾಗಳ ನೆರವೂ ಪಡೆಯಲಾಗಿದೆ, ಇಂದಿನಿಂದ ಹೆಚ್ಚುವರಿ ತಂಡ ನಿಯೋಜಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಯುವತಿ ಪತ್ತೆಗೆ ಮುಖ್ಯಮಂತ್ರಿ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಣಕ್ಕೆ ತೆರಳಿದ್ದ ಯುವತಿ ಕಾಣಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ. ಇಂದು ಇನ್ನೂ ಹೆಚ್ಚುವರಿಯಾಗಿ 40 ಅರಣ್ಯ ಸಿಬ್ಬಂದಿಯನ್ನು ಶೋಧ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕಾಣೆಯಾಗಿರುವ ಯುವತಿಯ ಪತ್ತೆಗೆ ಪ್ರಾಮಾಣಿಕ ಪ್ರಯತ್ನ ಮುಂದುವರಿದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…