ಮಂಗಳೂರು : ಸಿಎಂ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದು, ಈತನಕ ನಾನೇ ಐದು ವರ್ಷ ಪೂರೈಸುವೆ ಎನ್ನುತಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್ ನತ್ತ ಬೊಟ್ಟು ಮಾಡಿದ್ದಾರೆ.
ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಸಿಎಂ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾ ಹೈಕಮಾಂಡ್ಗೆ ಸೇರಿದ್ದಾಗಿದೆ. ನಾನೇ ಸಿಎಂ ಆಗಿ ಮುಂದುವರೆಯುವದರಲ್ಲಿಯೂ ಹೈ ತೀರ್ಮಾನವೇ ಅಂತೀಮ ಎಂದು ಹೇಳಿದ್ದಾರೆ.
ಇದನ್ನೂ ಓದಿ:-ಮೈಸೂರು | ಲಾಭದಾಸೆಗೆ ಬಿದ್ದ ಮಹಿಳೆಗೆ 1.58 ಕೋಟಿ ರೂ.ವಂಚನೆ! ಮೋಸ ಹೋಗಿದ್ದೇಗೆ?
ಇನ್ನೂ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರೇ ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.
ಎಸ್.ಐ.ಟಿ ವರದಿ
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್.ಐ.ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್.ಐ.ಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್.ಐ.ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್.ಐ.ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.
ವಾಹನ ಸೌಲಭ್ಯ
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…