ರಾಜ್ಯ

ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು.

ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದರು. ನಂತ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು.

ಸಿಎಂ ಸಿದ್ದರಾಮಯ್ಯ ಅವರಿಗೂ ಡಿಕೆಶಿ ಬ್ರೇಕ್‌ಫಾಸ್ಟ್‌ಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಜೊತೆ ಉಪಹಾರ ಸೇವಿಸಿದರು.

ಸಿಎಂ ಸಿದ್ದರಾಮಯ್ಯರಿಗಾಗಿ ನಾಟಿಕೋಳಿ ಸಾರು ಮತ್ತು ಇಡ್ಲಿಯನ್ನು ತಯಾರಿಸಲಾಗಿತ್ತು. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಖುಷಿಯಿಂದ ಸವಿದರು. ಈ ವೇಳೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

27 mins ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

1 hour ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

2 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

3 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

3 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

3 hours ago