ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು.
ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು.
ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.
ಅಕ್ಕಾತಾಯಿ ಜೊತೆ ಬಂದಿದ್ದ ಇತರೆ ತಾಯಂದಿರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.
ನಿಮ್ಮ ಆಶೀರ್ವಾದ ಹೀಗೇ ಇರಲಿ: ಅಕ್ಕಾತಾಯಿ ಮತ್ತು ಗ್ರಾಮದ ತಾಯಂದಿರು ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ತಾಯಂದಿರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…