ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಸಮಾನತೆ ಸಮಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರೂ ಇದು ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಮಕ್ಕಳಿಗೆ ಕಿವಿಮಾತು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ ಎಂದು ಮುಖ್ಯ ಮಂತ್ರಿಗಳು ಮಕ್ಕಳಿಗೆ ತಿಳಿ ಹೇಳಿದರು.
ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಮುಖ್ಯ ಮಂತ್ರಿಗಳು ಸಂವಾದ ನಡೆಸಿದರು.
ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡಿದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…