ರಾಜ್ಯ

ಮನೆ ಮನೆಗೆ ಹೋಗಿ  ಆರೋಗ್ಯ ತಪಾಸಣೆ ನಡೆಸುವ  ಆರೋಗ್ಯ ಸೇವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ

ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.

ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಅರಾಮಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ ಎನ್ನುವ ತಮ್ಮದೇ ಅನುಭವಗಳ ಆರೋಗ್ಯ ಸಂದೇಶ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ” ನೂತನ‌ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರೋಗಿಗಳೊಂದಿಗೆ zoom call ನಲ್ಲಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.

ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದರು.

ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಎಂದರು.

ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ ಎಂದರು.

ಕ್ಯಾನ್ಸರ್ ಕೂಡಿ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ ಎಂದರು.

ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದರು.

ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಹರ್ಷಗುಪ್ತ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago