ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ
ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.
ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ, ಸರ್ಕಾರದ ಕೆಲಸನೂ ಮಾಡ್ತಿದ್ದೀನಿ, ವ್ಯಾಯಾಮನೂ ಮಾಡ್ತಿದ್ದೀನಿ. ಅರಾಮಾಗಿ ಎಲ್ಲಾ ಕೆಲಸ, ಕಾರ್ಯಗಳಲ್ಲೂ ಭಾಗವಹಿಸುತ್ತಿದ್ದೇನೆ. ಆದರೆ ವೈದ್ಯರು ಹೇಳಿದಂತೆ ಕೇಳುತ್ತೇನೆ. ಹೀಗಾಗಿ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದೇನೆ ಎನ್ನುವ ತಮ್ಮದೇ ಅನುಭವಗಳ ಆರೋಗ್ಯ ಸಂದೇಶ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆ” ನೂತನ ಮಹತ್ವದ ಜನಾರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ರೋಗಿಗಳೊಂದಿಗೆ zoom call ನಲ್ಲಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.
ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದರು.
ಬಹಳ ಜನರಿಗೆ ವೈದ್ಯರಿಗೆ ತಪಾಸಣೆ ವೆಚ್ಚ ಕೊಡುವುದಕ್ಕೂ ಸಾಧ್ಯವಾಗುವುದಿಲ್ಲ. ಆದರೆ ಇಂಥವರಿಗೂ ಆರೋಗ್ಯದ ಹಕ್ಕು ಇದೆ. ತಪಾಸಣೆಯಿಂದ ಸಾಂಕ್ರಾಮಿಕ ರೋಗಗಳು, ಸಾಂಕ್ರಾಮಿಕವಲ್ಲದ ರೋಗಗಳೂ ಪತ್ತೆಯಾಗುತ್ತವೆ ಎಂದರು.
ಬಹಳ ಜನ ಆರೋಗ್ಯ ತಪಾಸಣೆಯನ್ನೇ ಮಾಡಿಸಿಕೊಂಡಿರುವುದಿಲ್ಲ. ಹೀಗಾಗಿ ಮನೆ ಮನೆಗೆ ತೆರಳಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವ ಮಹತ್ವದ ಕಾರ್ಯಕ್ರಮ ಆರಂಭಿಸಿದ್ದೇವೆ. ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ಒದಗಿಸುವ ಗುರಿ ನಮ್ಮದಾಗಿದೆ ಎಂದರು.
ಕ್ಯಾನ್ಸರ್ ಕೂಡಿ ಆರಂಭದಲ್ಲೇ ಪತ್ತೆಯಾದರೆ ಗುಣಪಡಿಸಲು ಸಾಧ್ಯವಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು. ಶಿಸ್ತಿನ ವ್ಯಾಯಾಮಯುಕ್ತ ಜೀವನಶೈಲಿ ಮುಖ್ಯ ಎಂದರು.
ಒತ್ತಡದ ಜೀವನದಿಂದಲೂ ಕಾಯಿಲೆಗಳು ಬರುತ್ತವೆ. ಈಗ ರಸಾಯನಿಕ ಬಳಸಿದ ಆಹಾರದ ಸೇವನೆ ಹೆಚ್ಚಾಗಿರುವುದರಿಂದಲೂ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ ಎಂದರು.
ಮೊಟ್ಟೆ, ಮೀನು, ಮಾಂಸ ತಿಂದರೆ ಡಾಯಾಬಿಟಿಕ್ ಬರುತ್ತದೆ, ಹೆಚ್ಚುತ್ತದೆ ಎನ್ನುವ ತಪ್ಪುಕಲ್ಪನೆ ಇದೆ. ಹಾಗೇನೂ ಇಲ್ಲ. ಮೊಟ್ಟೆ ಮಾಂಸ ಬಿಟ್ಟು ಬರೀ ಅನ್ನ ತಿಂದರೆ ಹೇಗೆ ? ಬ್ಯಾಲೆನ್ಸ್ ಆಹಾರ ಸೇವನೆ ಮುಖ್ಯ ಎಂದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…