ರಾಜ್ಯ

ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರು  ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ (ಫೆಬ್ರವರಿ.11) ನಡೆಯುತ್ತಿರುವ ಇನ್‌ವೆಸ್ಟ್‌ ಕರ್ನಾಟಕ-2025 ಕಾರ್ಯಕ್ರಮದಲ್ಲಿ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದೆ. ಅಲ್ಲದೇ ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜೊತೆಗೆ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಯಾವುದೇ ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಇದೇ ವೇಳೆ ಈ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕ ಮಾಹಿತಿ ನೀಡಿದ್ದು, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಆದರೆ ಇದೀಗ ರಾಜ್ಯ ಸರ್ಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಅಲ್ಲದೇ ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ ಹಾಗೂ ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲ್‌ ಫೋನ್‌ನಲ್ಲಿ ಸಹ ಸಿಗಲಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಕರ್ನಾಟಕ ಉದ್ಯೋಗ ಮಿತ್ರದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ ನೀಡಲಾಗುವುದು. ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಹಾಗೂ ಇತರೆ ಸಿದ್ಧತೆ ಆರಂಭಿಸಬಹುದು. ಹೀಗಾಗಿ ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಜೊತೆಗೆ ಈ ಪೋರ್ಟಲ್‌ನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡದ ನಕಾಶೆಗೆ ಅನುಮೋದನೆ ಮತ್ತು ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ತಿಳಿಸಿದ್ದಾರೆ.

ಇನ್ನೂ ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನು ಒದಗಿಸಲಾಗುವುದು. ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಇದು ಅನುಕೂಲವಾಗಲಿದೆ. ಅಲ್ಲದೇ ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿ ಇರಲಿದೆ. ಹೀಗಾಗಿ ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹ ಧನ, ಭತ್ಯೆ, ವಿನಾಯಿತಿ ಹಾಗೂ ರಿಯಾಯಿತಿಗಳನ್ನು ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್ ಮೂಲಕ ತಿಳಿದುಕೊಳ್ಳಬಹುದು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…

3 hours ago

ಸಂಸತ್‌ ಮುಂಗಾರು ಅಧಿವೇಶನ: ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ: ಜಾಗೃತ ಕರ್ನಾಟಕ ಆತಂಕ

ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…

7 hours ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಪುಟ ವಿಸ್ತರಣೆ ನಿರೀಕ್ಷೆ: ಸಂಕಟ ಪರೀಕ್ಷೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…

10 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ

ಕೃಷ್ಣ ಸಿದ್ದಾಪುರ ಸ್ಥಳೀಯರು ಜೀವಭಯದಿಂದ ವಾಸಿಸಬೇಕಾದ ಪರಿಸ್ಥಿತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ ಸಿದ್ದಾಪುರ: ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ…

10 hours ago