ಬೆಂಗಳೂರು: ಮಾನವ-ಆನೆ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ಆನೆ ದಿನದ ಅಂಗವಾಗಿ ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಮಾನವ-ಆನೆ ಸಂಘರ್ಷ ನಿರ್ವಹಣೆ ವಿಷಯ ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆನೆಗಳ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡಿದರು.
ಕಾಡಂಚಿನ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ವಿಶೇಷ ಟಾಸ್ಕ್ಫೋರ್ಸ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ರಾಜ್ಯದ ಕಾಡಂಚಿನ ಪ್ರದೇಶಗಳಲ್ಲಿ ಮಾನವ-ಆನೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಈ ಅಂತರಾಷ್ಟ್ರೀಯ ಸಮ್ಮೇಳನ ಮಾನವ-ಆನೆ ಸಂಘರ್ಷಗಳನ್ನು ಕಡಿಮೆ ಮಾಡುವಲ್ಲಿ ಕ್ರಮ ಕೈಗೊಳ್ಳಲು ತುಂಬಾ ಉತ್ತಮವಾಗಿದೆ.
ನಮ್ಮ ಕರ್ನಾಟಕ ರಾಜ್ಯ ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯವಾಗಿದೆ. ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ 2ನೇ ರಾಜ್ಯವಾಗಿದೆ. ಅಲ್ಲದೇ ಅತೀ ಹೆಚ್ಚು ಅರಣ್ಯ ಭೂಮಿ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಕಳೆದ 10 ವರ್ಷಗಳಲ್ಲಿ 2500 ಮಾನವ-ಆನೆ ಸಂಘರ್ಷ ಪ್ರಕರಣಗಳು ಆಗಿವೆ. ಮಾನವ-ಆನೆ ಸಂಘರ್ಷಗಳ ತಡೆಗೆ ನಮ್ಮ ಸರ್ಕಾರ ವಿಶೇಷ ಅನುದಾನ ನೀಡಿದೆ. ಇದಕ್ಕಾಗಿ ಬಜೆಟ್ನಲ್ಲಿ ಹಣವನ್ನು ಕೂಡ ಮೀಸಲಿಡಲಾಗಿದೆ ಎಂದು ವಿವರ ನೀಡಿದರು.
ಇನ್ನು ಕಾಡಂಚಿನ ಗ್ರಾಮಗಳಲ್ಲಿ ಆನೆಗಳು ಬರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಜೊತೆಗೆ ಸೋಲಾರ್ ಫೆನ್ಸಿಂಗ್ ಅಳವಡಿಸಲಾಗುವುದು ಎಂದರು. ಇದಲ್ಲದೇ ಕರ್ನಾಟಕದಲ್ಲಿ ವಿಶೇಷ ಟಾಸ್ಕ್ಫೋರ್ಸ್ ರಚನೆ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇನ್ನು ಮುಂದೆ ಕಾಡಂಚಿನಲ್ಲಿ ವಾಸಿಸುತ್ತಿರುವ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…
ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್ ಹೆಲಿಕಾಪ್ಟರ್ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್ನ ಪ್ರಾದೇಶಿಕ ನೀರಿನಲ್ಲಿ…
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…
ವಾಷಿಂಗ್ಟನ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…