pm kusum c yojane
ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಾನಾ ಭಾಗಗಳಿಂದ ವಿದ್ಯುನ್ಮಾನ ಮಾದರಿಯಲ್ಲಿ ಸಂಪರ್ಕದಲ್ಲಿದ್ದ ರೈತರೊಂದಿಗೆ ಸಂವಾದ ನಡೆಸಿದರು.
ಮುಂದಿನ ದಿನಗಳಲ್ಲಿ ಏಳು ಗಂಟೆ ಹಗಲಿನ ವೇಳೆಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುತ್ತೇವೆ. ರೈತರಿಗೆಂದು ಜಾರಿಗೊಳಿಸಿರುವ ಹಲವಾರು ಯೋಜನೆಗಳಲ್ಲಿ ಇದೂ ಒಂದು ಎಂದು ಹೇಳಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಈ ವರ್ಷ ನೂರು ಉಪಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಪಸ್ಥಾವರಗಳನ್ನು ಹಾಗೂ ಅದಕ್ಕೆ ಪೂರಕ ವಿದ್ಯುತ್ ಮಾರ್ಗಗಳನ್ನು ನಿರ್ಮಿಸಲಾಗುವುದು ಎಂದರು.
ಕೃಷಿ ಪಂಪ್ಸೆಟ್ಗಳಿಗೆ 19 ಸಾವಿರ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಆರ್ಡಿಎಸ್ಎಸ್ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕ ಮತ್ತು ರಾಜ್ಯಗಳನ್ನು ಕೈಬಿಡಲಾಗಿದೆ. ಇದರಿಂದ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…