Mysore
29
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಪಿಎಂ ಕುಸುಮ್‌-ಸಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

pm kusum c yojane

ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಾನಾ ಭಾಗಗಳಿಂದ ವಿದ್ಯುನ್ಮಾನ ಮಾದರಿಯಲ್ಲಿ ಸಂಪರ್ಕದಲ್ಲಿದ್ದ ರೈತರೊಂದಿಗೆ ಸಂವಾದ ನಡೆಸಿದರು.

ಮುಂದಿನ ದಿನಗಳಲ್ಲಿ ಏಳು ಗಂಟೆ ಹಗಲಿನ ವೇಳೆಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸುತ್ತೇವೆ. ರೈತರಿಗೆಂದು ಜಾರಿಗೊಳಿಸಿರುವ ಹಲವಾರು ಯೋಜನೆಗಳಲ್ಲಿ ಇದೂ ಒಂದು ಎಂದು ಹೇಳಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಈ ವರ್ಷ ನೂರು ಉಪಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಪಸ್ಥಾವರಗಳನ್ನು ಹಾಗೂ ಅದಕ್ಕೆ ಪೂರಕ ವಿದ್ಯುತ್ ಮಾರ್ಗಗಳನ್ನು ನಿರ್ಮಿಸಲಾಗುವುದು ಎಂದರು.

ಕೃಷಿ ಪಂಪ್‍ಸೆಟ್‍ಗಳಿಗೆ 19 ಸಾವಿರ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಆರ್‌ಡಿಎಸ್‍ಎಸ್ ಯೋಜನೆ ಜಾರಿಗೊಳಿಸಲಾಗಿದೆ. ಕರ್ನಾಟಕ ಮತ್ತು ರಾಜ್ಯಗಳನ್ನು ಕೈಬಿಡಲಾಗಿದೆ. ಇದರಿಂದ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Tags:
error: Content is protected !!