ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದುಗೆ, ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮೀ, ಮಂಜುಳ, ತೃತೀಯ ಲಿಂಗಿ ಮಂಜುಳ ಹಾಗೂ ವಿಶೇಷ ಚೇತನ ಮಕ್ಕಳು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗೆ ನಾವೆಲ್ಲಾ ಹೇಗೆ ಶ್ರಮ ವಹಿಸಬೇಕು. ಪ್ರಜಾಪ್ರಭುತ್ವದ ದಿನದ ಅಂಗವಾಗಿ ನಾವೆಲ್ಲಾ ದೇಶ ಹಾಗೂ ರಾಜ್ಯದಲ್ಲಿ ಸಹೋದರರಂತೆ ಇರುವಂತೆ ಜನತೆಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…