ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ಈ ಹಗರಣದಲ್ಲಿ ನಾವು ಸಿಕ್ಕಿಹಾಕಿಕೊಳ್ಳುತ್ತೇವೆ ಎಂಬ ಭಯದಿಂದ ಶಾಸಕರು ಹಾಗೂ ಸಚಿವರು ಸಿಎಂ ಸಿದ್ದರಾಮಯ್ಯರ ಬಳಿ ಯಾರೂ ಹೋಗುತ್ತಿಲ್ಲ.
ಹಗರಣಗಳು ಬೆಳಕಿಗೆ ಬಂದ ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪಗಳನ್ನು ಮುಚ್ಚಿ ಹಾಕಲು, ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲಾ ಹಗರಣಗಳ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣವನ್ನು ಸಿಬಿಐಗೆ ವಹಿಸಲೇಬೇಕು. ಸಿಬಿಐ ತನಿಖೆಗೆ ವಹಿಸಿ ಅಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ನಡೆಸಬೇಕು. ಯಾರೇ ತಪ್ಪಿತಸ್ಥರಾಗಿದ್ದರೂ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…