ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಅವರ ಪಕ್ಷದವರೇ ಮೋಸ ಮಾಡುತ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್‌ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ. ಮ್ಯೂಸಿಕಲ್‌ ಚೇರ್‌ ಮಾಡುತ್ತಿರುವವರು ಪಟಾಕಿ ಇಡುತ್ತಿದ್ದಾರೆ. ಅವರು ಪಟಾಕಿ ಒಡೆದಾಗ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ 60 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ. ಈಗಾಗಲೇ ಬಿಪಿಎಲ್‌ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ. ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್‌ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಡಲಿದೆ ಎಂದರು.

ಈಗಾಗಲೇ ಹಿಮಾಚಲ ಪ್ರದೇಶ ಆರ್ಥಿಕ ದುಸ್ಥಿತಿಗೆ ತಲುಪಿದೆ. ಕರ್ನಾಟಕ ಪಾಪರ್‌ ಆದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಬೇಕು ಎಂದು ಕಾಂಗ್ರೆಸ್‌ ಯೋಚಿಸಿದೆ. ಅಧಿಕಾರಿಗಳು ಒಂದೋ ಆತ್ಮಹತ್ಯೆ ಮಾಡಿಕೊಳ್ಳಬೇಕು, ಇಲ್ಲವಾದರೆ ಸ್ವಯಂ ನಿವೃತ್ತಿ ಪಡೆಯಬೇಕು ಎಂಬಂತಹ ಸ್ಥಿತಿ ಇದೆ. ಇಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ಬದುಕುವ ಗ್ಯಾರಂಟಿ ಇಲ್ಲ ಎಂದು ದೂರಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago