ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ. ಮ್ಯೂಸಿಕಲ್ ಚೇರ್ ಮಾಡುತ್ತಿರುವವರು ಪಟಾಕಿ ಇಡುತ್ತಿದ್ದಾರೆ. ಅವರು ಪಟಾಕಿ ಒಡೆದಾಗ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.
ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ. ಈಗಾಗಲೇ ಬಿಪಿಎಲ್ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ. ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಡಲಿದೆ ಎಂದರು.
ಈಗಾಗಲೇ ಹಿಮಾಚಲ ಪ್ರದೇಶ ಆರ್ಥಿಕ ದುಸ್ಥಿತಿಗೆ ತಲುಪಿದೆ. ಕರ್ನಾಟಕ ಪಾಪರ್ ಆದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಬೇಕು ಎಂದು ಕಾಂಗ್ರೆಸ್ ಯೋಚಿಸಿದೆ. ಅಧಿಕಾರಿಗಳು ಒಂದೋ ಆತ್ಮಹತ್ಯೆ ಮಾಡಿಕೊಳ್ಳಬೇಕು, ಇಲ್ಲವಾದರೆ ಸ್ವಯಂ ನಿವೃತ್ತಿ ಪಡೆಯಬೇಕು ಎಂಬಂತಹ ಸ್ಥಿತಿ ಇದೆ. ಇಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ಬದುಕುವ ಗ್ಯಾರಂಟಿ ಇಲ್ಲ ಎಂದು ದೂರಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…