ರಾಜ್ಯ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

2024-25 ನೇ ಸಾಲಿನಲ್ಲಿ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ 3,631 ಕೋಟಿ ರೂ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕ‌ರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿಗಳಿಗೆ ನೋಟಿಸ್‌ ನೀಡಬೇಕು, ಅಗತ್ಯ ಬಿದ್ದರೆ ಅಮಾನತು ಮಾಡಬೇಕು ಎಂದು ಸೂಚನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಬಾಕಿ ಉಳಿದದ್ದು ಹಾಗೆಯೇ ಇದೆ, ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago