ರಾಜ್ಯ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

2024-25 ನೇ ಸಾಲಿನಲ್ಲಿ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ 3,631 ಕೋಟಿ ರೂ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕ‌ರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ ಎಂಡಿಗಳಿಗೆ ನೋಟಿಸ್‌ ನೀಡಬೇಕು, ಅಗತ್ಯ ಬಿದ್ದರೆ ಅಮಾನತು ಮಾಡಬೇಕು ಎಂದು ಸೂಚನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಬಾಕಿ ಉಳಿದದ್ದು ಹಾಗೆಯೇ ಇದೆ, ಮಾರ್ಚ್ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

13 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

13 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago