ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು.
ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ.
ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ.
ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು.
ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ.
ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.
1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ.
ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…