ರಾಜ್ಯ

ಉಚಿತ ಡಯಾಲಿಸಿಸ್‌ ಸೇವೆಗೆ ಚಾಲನೆ ನೀಡಿದ ಸಿಎಂ ಸಿದರಾಮಯ್ಯ

ಬೆಂಗಳೂರು: ನಗರದ ಮಲ್ಲೇಶ್ವರಂ‌ನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago