ರಾಜ್ಯ

“ಶಾಲೆಯ ಅಂಗಳದಲ್ಲಿ ತಾರಾಲಯ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು “ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ್ದು, ಈ ಸಾಧನೆ ಹೆಮ್ಮೆಯ ವಿಷಯ,” ಎಂದು ತಿಳಿಸಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಅವರು ಮಾತನಾಡಿ, “ನಮ್ಮ ಸರ್ಕಾರವು ವಿಜ್ಞಾನ ಶಿಕ್ಷಣಕ್ಕೆ ದೃಢವಾಗಿ ಬದ್ಧವಾಗಿದೆ. ಈ ಯೋಜನೆಗೆ ಹೊಸ ಚೈತನ್ಯ ಮತ್ತು ಸುಧಾರಿತ ತಂತ್ರಜ್ಞಾನದ ಸ್ಪರ್ಶ ನೀಡಲಾಗಿದೆ. ಪ್ರಸ್ತುತ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿರುವ ಈ ಮಹತ್ವದ ಸೇವೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯ ಮಕ್ಕಳು ತಲುಪುವಂತೆ ವಿಸ್ತರಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು,” ಎಂದು ಘೋಷಿಸಿದರು.

ಏನಿದು ಯೋಜನೆ?:
ನಗರಗಳಿಗೆ ಸೀಮಿತವಾಗಿದ್ದ ಪ್ಲಾನೆಟೇರಿಯಂ ಅನುಭವದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಸುಸಜ್ಜಿತ ವಾಹನಗಳಲ್ಲಿ 5 ಮೀಟರ್ ಗಾತ್ರದ ಗುಂಬಜ್ (Dome), 360-ಡಿಗ್ರಿ ಫಿಶ್‌ ಐ ಲೆನ್ಸ್ ಪ್ರೊಜೆಕ್ಟರ್, ಹವಾ ನಿಯಂತ್ರಣ ವ್ಯವಸ್ಥೆ ಮತ್ತು ಅತ್ಯಾಧುನಿಕ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುತ್ತದೆ. ಮಕ್ಕಳು ಶಾಲೆಯ ಅಂಗಳದಲ್ಲೇ ಕುಳಿತು ಬ್ರಹ್ಮಾಂಡದ ಅದ್ಭುತಗಳನ್ನು ವೀಕ್ಷಿಸುವ ಅಪರೂಪದ ಅವಕಾಶವನ್ನು ಇದು ಕಲ್ಪಿಸಲಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago