ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ.? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸೈಟ್ ನನ್ನ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತು. ಈಗ 50:50 ಅನುಪಾತವೇ ಇಲ್ಲ. ನಿಮಗೆ ಜಮೀನು ಕೊಟ್ಟವನ ಅಸ್ತಿತ್ವವೇ ಯಕ್ಷ ಪ್ರಶ್ನೆಯಾಗಿದೆ. ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
1985ರಲ್ಲಿ ಇಂದಿರಾಗಾಂದಿ ಸರ್ವಾಧಿಕಾರಿಯಾಗಿದ್ದರು. 2023-24ರಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ವಾಧಿಕಾರಿಯಾಗಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕು ಇಲ್ವಾ.? ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಕಮಾಂಡ್ ಇದ್ದರೆ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಿರಿ ಎಂದು ಹೇಳಿರುವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಅವರೇ ಇಂದಿರಾಗಾಂಧಿ ಕೂಡ ಹೀಗೆ ಇದ್ದರು. ನನ್ನನ್ನು ತಡೆಯುವವರು ಯಾರೂ ಇಲ್ಲವೆಂದು ಭಾವಿಸಿದ್ದರು ಎಂದು ಕಿಡಿಕಾರಿದರು.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…