ರಾಜ್ಯ

ಮೇಕೆದಾಟು ಯೋಜನೆಗೆ ಸಹಕರಿಸಿ: ದೆಹಲಿಯಲ್ಲಿ ಸಂಸದರ ಜೊತೆ ಡಿನ್ನರ್‌ ಮೀಟಿಂಗ್‌ ನಡೆಸಿದ ಸಿಎಂ

ನವದೆಹಲಿ: ರಾಜ್ಯದಿಂದ ಆಯ್ಕೆಯಾದ ಸಂಸದರ ಜೊತೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಡಿನ್ನರ್‌ ಮೀಟಿಂಗ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಸಂಸದರ ಜತೆ ಮಾತನಾಡಿದರು.

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ ಆಯೋಜಿಸಲಾಗಿದೆ. ಕರುನಾಡು ಮತ್ತು ಕನ್ನಡಿಗರ ಹಿತಕ್ಕಾಗಿ ತಮ್ಮೆಲ್ಲರ ಸಹಕಾರ ಇರಲಿ ಎಂದು ಸಿದ್ದರಾಮಯ್ಯ ಹೇಳಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಬಜೆಟ್ ನಲ್ಲೇ ಅನುದಾನ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊಡಿಸಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ. 18,172 ಕೋಟಿ ರೂ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ, ಇದಕ್ಕಾಗಿ ನಿಮ್ಮೆಲ್ಲರ ಪ್ರಯತ್ನ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಬಾಕಿ ಇದೆ. ಇದರ ಈಡೇರಿಕೆಗೆ ತಾವು ಪ್ರಯತ್ನಿಸಬೇಕು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳುತ್ತದೆ. ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು ಎಂದರು.

ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರಲ್ಲಿ ಮನವಿ ಮಾಡುತ್ತೇನೆ.

ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಬಲವಾಗಿ ವಾದ ಮಂಡಿಸಬೇಕಾಗಿದೆ. ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ ಎಂದು ಮಾಹಿತಿ ನೀಡಿದರು.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಭೆಯಲ್ಲಿ ನೆರೆದಿದ್ದ ರಾಜ್ಯದ ಎಲ್ಲಾ ಸಂಸದರ ಜತೆ ಸಿಎಂ ಸಿದ್ದರಾಮಯ್ಯ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago