ರಾಜ್ಯ

ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ; ರಾಜ್ಯದ ಹೆದ್ದಾರಿ ಕುರಿತು ಚರ್ಚೆ

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ

ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ(ಏ.2) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಪತ್ರದ ವಿವರ ಇಂತಿದೆ;

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ  ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.

  • ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.
  • 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ
  • ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.
  • ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.
  • ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.
  • ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.

10,000 ಪಿ.ಯು.ಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.

2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.

3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.

4. ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.

5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.

6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.

7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)

8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ

9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.

10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ

11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು

12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು.

ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಪತ್ರದಲ್ಲಿ ಕೋರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

44 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

45 mins ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

2 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

2 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

3 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

3 hours ago