Mysore
27
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸ್ಥಳೀಯ ಬ್ರೂಕ್‌ ಫೀಲ್ಡ್‌ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರ ಕುಶಲೋಪಾಯ ಕೇಳಿದರು ಮತ್ತು ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೊಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದ್ದು, ಇನ್ನೆರೆಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಈ ಸ್ಫೋಟ ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ತಿಳಿಯಲಿದೆ. ಜೊತೆಗೆ ಕುಕ್ಕರ್‌ ಬ್ಲಾಸ್ಟ್‌ ಹಾಗು ಕೆಫೆ ಬ್ಲಾಸ್ಟ್‌ಗೂ ಸಾಮ್ಯತೆ ಇದೆಯೇ ಎಂಬುದು ತನಿಖೆ ನಂತರ ಬಹಿರಂಗಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಭದ್ರತಾ ಲೋಕ ಕುರಿತು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಕಾಲದಲ್ಲಿಯೂ ಭದ್ರತಾ ಲೋಕ ಆಗಿದೆ. ಅವರು ಅಧಿಕಾರದಲ್ಲಿದ್ದಾಗಲೂ ಬ್ಲಾಸ್ಟ್‌ ಆಗಿದೆ. ಆದಷ್ಟು ಬೇಗ ಶಂಕಿತರನ್ನು ಪತ್ತೆ ಮಾಡಿ, ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.

ಬಳಿಕ ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!