ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸ್ಥಳೀಯ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರ ಕುಶಲೋಪಾಯ ಕೇಳಿದರು ಮತ್ತು ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೊಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದ್ದು, ಇನ್ನೆರೆಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಈ ಸ್ಫೋಟ ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ತಿಳಿಯಲಿದೆ. ಜೊತೆಗೆ ಕುಕ್ಕರ್ ಬ್ಲಾಸ್ಟ್ ಹಾಗು ಕೆಫೆ ಬ್ಲಾಸ್ಟ್ಗೂ ಸಾಮ್ಯತೆ ಇದೆಯೇ ಎಂಬುದು ತನಿಖೆ ನಂತರ ಬಹಿರಂಗಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಭದ್ರತಾ ಲೋಕ ಕುರಿತು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಕಾಲದಲ್ಲಿಯೂ ಭದ್ರತಾ ಲೋಕ ಆಗಿದೆ. ಅವರು ಅಧಿಕಾರದಲ್ಲಿದ್ದಾಗಲೂ ಬ್ಲಾಸ್ಟ್ ಆಗಿದೆ. ಆದಷ್ಟು ಬೇಗ ಶಂಕಿತರನ್ನು ಪತ್ತೆ ಮಾಡಿ, ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.
ಬಳಿಕ ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…