ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸ್ಥಳೀಯ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರ ಕುಶಲೋಪಾಯ ಕೇಳಿದರು ಮತ್ತು ಗಾಯಾಳುಗಳ ಆರೋಗ್ಯದ ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರೊಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆಯಾಗಿದ್ದು, ಇನ್ನೆರೆಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು. ಈ ಸ್ಫೋಟ ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ತಿಳಿಯಲಿದೆ. ಜೊತೆಗೆ ಕುಕ್ಕರ್ ಬ್ಲಾಸ್ಟ್ ಹಾಗು ಕೆಫೆ ಬ್ಲಾಸ್ಟ್ಗೂ ಸಾಮ್ಯತೆ ಇದೆಯೇ ಎಂಬುದು ತನಿಖೆ ನಂತರ ಬಹಿರಂಗಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಭದ್ರತಾ ಲೋಕ ಕುರಿತು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರ ಕಾಲದಲ್ಲಿಯೂ ಭದ್ರತಾ ಲೋಕ ಆಗಿದೆ. ಅವರು ಅಧಿಕಾರದಲ್ಲಿದ್ದಾಗಲೂ ಬ್ಲಾಸ್ಟ್ ಆಗಿದೆ. ಆದಷ್ಟು ಬೇಗ ಶಂಕಿತರನ್ನು ಪತ್ತೆ ಮಾಡಿ, ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.
ಬಳಿಕ ಗಾಯಾಳುಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…