ರಾಜ್ಯ

ನಟ ಶಿವರಾಜ್‌ ಕುಮಾರ್‌ರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಟ ಶಿವರಾಜ್‌ ಕುಮಾರ್‌ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.

ಈ ಕುರಿತು ಇಂದು(ಜನವರಿ.27) ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಶಿವರಾಜ್‌ ಕುಮಾರ್‌ ಅವರ ಶಸ್ತ್ರಚಿಕಿತ್ಸೆಯ ನಂತರ ಅಮೆರಿಕಾದಿಂದ ನಿನ್ನೆ ತಾನೇ ತಮ್ಮ ನಿವಾಸಕ್ಕೆ ಹಿಂತಿರುಗಿದ್ದಾರೆ. ಆದರೆ ನಾನು ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಿದಾಗ, ಅವರು ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದರು. ಹೀಗಾಗಿ ನಾನು ಇಂದು ಅವರ ಆರೋಗ್ಯವನ್ನು ವಿಚಾರಿಸಲು ಭೇಟಿ ನೀಡಿದ್ದೇನೆ ಎಂದರು.

ಈ ವೇಳೆ ಶಿವರಾಜ್‌ ಕುಮಾರ್‌ ಅವರು ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುತ್ತೇನೆ ಎಂದಿದ್ದಾರೆ. ಅಲ್ಲದೇ ನನಗೆ ಶಿವರಾಜ್‌ ಕುಮಾರ್‌ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು. ಜೊತೆಗೆ ಅಭಿಮಾನಿಗಳ ಹರಕೆ-ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಅವರಿಗೆ ಮುಂದಿನ ಜೀವನ ಸುಖ-ಶಾಂತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

1 hour ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

2 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

3 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

4 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

4 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

4 hours ago