ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.
ಈ ಕುರಿತು ಇಂದು(ಜನವರಿ.27) ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಅಮೆರಿಕಾದಿಂದ ನಿನ್ನೆ ತಾನೇ ತಮ್ಮ ನಿವಾಸಕ್ಕೆ ಹಿಂತಿರುಗಿದ್ದಾರೆ. ಆದರೆ ನಾನು ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಿದಾಗ, ಅವರು ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದರು. ಹೀಗಾಗಿ ನಾನು ಇಂದು ಅವರ ಆರೋಗ್ಯವನ್ನು ವಿಚಾರಿಸಲು ಭೇಟಿ ನೀಡಿದ್ದೇನೆ ಎಂದರು.
ಈ ವೇಳೆ ಶಿವರಾಜ್ ಕುಮಾರ್ ಅವರು ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುತ್ತೇನೆ ಎಂದಿದ್ದಾರೆ. ಅಲ್ಲದೇ ನನಗೆ ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಯಿತು. ಜೊತೆಗೆ ಅಭಿಮಾನಿಗಳ ಹರಕೆ-ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಅವರಿಗೆ ಮುಂದಿನ ಜೀವನ ಸುಖ-ಶಾಂತಿಯಿಂದ ಕೂಡಿರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…