ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮನವರಿಕೆ ಮಾಡಿದ್ದು, ಶೀಘ್ರ ಪರಿಹಾರ ಬಿಡುಗಡೆ ಕೋರಿ ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಗದ್ದುಗೆ ಹಿಡಿದ ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಭೇಟಿಯಾಗುತ್ತಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರದಿಂದ ಬರ ಪರಿಹಾರ ಒಂದು ಪೈಸೆಯೂ ಬಂದಿಲ್ಲ ಎಂದು ಪಿಎಂ ವಿರುದ್ಧ ಕಿಡಿಕಾರಿದ್ದರು. ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಪ್ರಧಾನಿ ಮೋದಿ ರಾಜ್ಯದ ಮೇಲೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ದೂರಿದ್ದರು.
ಈ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿದ್ದು, ಬರ ಪರಿಹಾರ ಕುರಿತು ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.
ಇದಲ್ಲದೇ ಇಂದು ನಡೆಯುವ ಇಂಡಿಯಾ ಬ್ಲಾಕ್ ನ ನಾಲ್ಕನೇ ಸಭಯೆಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ಲೋಕಸಭಾ ಚುನಾವಣೆ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…